Skip to main content

ಪ್ರಾಚೀನ ಕಾಲದ ಶಿಲ್ಪಕಲಾ ದೇಗುಲಗಳ ಸಂರಕ್ಷಿಸಿ

ಪ್ರಾಚೀನ ಕಾಲದ ಶಿಲ್ಪಕಲಾ ದೇಗುಲಗಳ ಸಂರಕ್ಷಿಸಿ
ಇಂದ prabhu
ಬರೆದಿದ್ದುAugust 9, 2018
noಅನಿಸಿಕೆ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರಿನ ಎಸ್.ಕೆ.ವಿ.ಪಿ ಪದವಿ ಮಹಾವಿದ್ಯಾಲಯ , ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರ, ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರ್, ಹಾಗೂ ಎನ್.ಎಸ್.ಎಸ್. ಘಟಕ ೧ ,೨ರ ಸಹಯೋಗದಲ್ಲಿ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಕುರಿತ ಕಾರ್ಯಕ್ರಮ ದಿ.೮-೮-೨೦೧೮ ರಂದು ಜರುಗಿತು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ ವಹಿಸಿದ್ದರು. ಪರಂಪರಾ ಕೂಟದ ಸಂಚಾಲಕ ಡಾ.ಎಂ.ಎನ್.ಕಡಪಟ್ಟಿ ಪ್ರಾಸ್ತಾವಿಕವಾಗಿ ಪ್ರಾಚೀನ ಕಾಲದ ಸ್ಮಾರಕಗಳ ಸಂರಕ್ಷಣೆ ಕುರಿತು ಮಾತನಾಡಿದರು. ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ್,ಡಾ.ಪ್ರಭು ಗಂಜಿಹಾಳ್ ಸ್ವಯಂ ಸೇವಕರು ಸ್ವಚ್ಚತಾ ಪಕ್ವಾಡಾ ಕಾರ್ಯಕ್ರಮ ಅಗಷ್ಟ್ ೧ ರಿಂದ ಅಗಷ್ಟ ೧೫ ರವರೆಗೆ ನಡೆಯಲಿದ್ದು ರೋಣ ತಾಲೂಕಿನಲ್ಲಿ ಐತಿಹಾಸಿಕ ದೇವಾಲಯಗಳು ಇದ್ದು ಅವುಗಳ ಸುತ್ತಮುತ್ತಲೂ ಸ್ವಚ್ಚತಾ ಕಾರ್ಯ ಕೈಗೊಳ್ಳಬೇಕು ಎಂದರು. ಸ್ವಾಗತವನ್ನು ಸಹಜಾನಂದ ಕೊಡತಗೇರಿ ಮಾಡಿದರೆ ಕುಮಾರಿ ವಿಜಯಲಕ್ಷ್ಮೀ ಮಡಿವಾಳರ ನಿರೂಪಿಸಿದರು. ಕೊನೆಯಲ್ಲಿ ಸಂತೋಷ ಹೆಗ್ರಿ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

-ಡಾ.ಪ್ರಭು ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.