Skip to main content

ಹೊಳೆಆಲೂರಲ್ಲಿ ಶಾಸನಗಳ ಮಹತ್ವ ಮತ್ತು ಸಂರಕ್ಷಣೆ ಕಾರ್ಯಕ್ರಮ

ಹೊಳೆಆಲೂರಲ್ಲಿ ಶಾಸನಗಳ ಮಹತ್ವ ಮತ್ತು ಸಂರಕ್ಷಣೆ ಕಾರ್ಯಕ್ರಮ
ಇಂದ prabhu
ಬರೆದಿದ್ದುSeptember 10, 2018
noಅನಿಸಿಕೆ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರ್ ,ಮಹಾವಿದ್ಯಾಲಯದ ಪರಂಪರಾ ಕೂಟ ಇವುಗಳ ಸಹಯೋಗದಲ್ಲಿ ಶಾಸನಗಳ ಮಹತ್ವ ಮತ್ತು ಸಂರಕ್ಷಣೆ ಕಾರ್ಯಕ್ರಮ ಶನಿವಾರ ಜರುಗಿತು.
ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ ವಹಿಸಿದ್ದರು. ವಿಶೇಷ ಉಪನ್ಯಸಕರಾಗಿ ಜೋಯಿಡಾ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಭಾರಿ ಪ್ರಾಚಾರ್ಯ ಡಾ.ಎಸ್.ಎಸ್.ಅಂಗಡಿ ಆಗಮಿಸಿ ಶಾಸನಗಳ ಮಹತ್ವ ಮತ್ತು ಸಂರಕ್ಷಣೆ ಕುರಿತು ದೃಶ್ಯಗಳ ಮೂಲಕ ವಿವರಿಸಿ ವಿದ್ಯಾರ್ಥಿಗಳ ಪಾತ್ರ ಕುರಿತು ಮಾತನಾಡಿದರು.ಈ ಸಂದರ್ಬದಲ್ಲಿ ನಿಸಿಧಿಗಲ್ಲು,ಹುಲಿಬೇಟೆ, ಗೋಗ್ರಹಣ,ಕೋಟೆಕಾಳಗ, ಕುದುರೆ ಕಾಳಗ, ಸೀಮಾಸಂಬಂಧದ ಹೋರಾಟ, ಎತ್ತಿನಗಾಣ,ಊರಳಿವು, ಸತಿಗಲ್ಲುಗಳು, ಮಹಾಸತಿಗಲ್ಲುಗಳ ಕುರಿತು ವಿವರಣೇ ನೀಡಿ ವಿದ್ಯಾರ್ಥಿಗಳ ಸಂಶಯದ ಪ್ರಶ್ನೆಗಳನ್ನು ಪರಿಹರಿಸಿದರು. ಪ್ರಾಸ್ತಾವಿಕವಾಗಿ ಪರಂಪರಾಕೂಟದ ಕಾರ್ಯದರ್ಶಿ ಡಾ.ಪ್ರಭು ಗಂಜಿಹಾಳ್ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಬದಾಮಿಯ ಐತಿಹಾಸಿಕ ಸ್ಥಳಕ್ಕೆ ಭೇಟಿ ನೀಡುವ ವಿಷಯ ಮತ್ತು ಜಾಗೃತ ಜಾಥಾ ಕುರಿತು ಹೇಳಿದರು. ಪರಂಪರಾ ಕೂಟದ ಸಂಚಾಲಕ ಡಾ.ಎಂ.ಎನ್.ಕಡಪಟ್ಟಿ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಕು.ಎಸ್.ಆರ್.ವಾಲಿ ಸ್ವಾಗತಿಸಿದಳು,ಕೊನೆಗೆ ಎಸ್.ಆರ್.ಮರಡಿ ವಂದಿಸಿದನು. ಕು.ಪ್ರಿಯಾಂಕ ನಾಯಕ್ ನಿರೂಪಿಸಿದಳು. ಇತಿಹಾಸದ ವಿದ್ಯಾರ್ಥಿಗಳು , ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

-ಪ್ರಭು.ಅ.ಗಂಜಿಹಾಳ್
ಮೊ-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.