Skip to main content

ಹೊಳೆಆಲೂರ: ಪರಂಪರಾಕೂಟಾದಿಂದ ಶೈಕ್ಷಣಿಕ ಪ್ರವಾಸ

ಹೊಳೆಆಲೂರ: ಪರಂಪರಾಕೂಟಾದಿಂದ ಶೈಕ್ಷಣಿಕ ಪ್ರವಾಸ
ಇಂದ prabhu
ಬರೆದಿದ್ದುMarch 31, 2019
noಅನಿಸಿಕೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪರಂಪರಾಕೂಟದ ವತಿಯಿಂದ "ಐತಿಹಾಸಿಕ ಸ್ಠಳಗಳ ಶೈಕ್ಷಣಿಕ ಅಧ್ಯಯನ" ಕುರಿತು ಬಾದಾಮಿ, ವಿಜಯಪುರಗೆ ಒಂದು ದಿನದ ಪ್ರವಾಸ ಕೈಗೊಳ್ಳಲಾಯಿತು. ಬಾದಾಮಿಯಲ್ಲಿ ಗುಹಾದೇವಾಲಯಗಳ ಕುರಿತು ಮಾಹಿತಿ ನೀಡಲಾಯಿತಲ್ಲದೆ, ವಿಜಯಪುರದಲ್ಲಿ ಗೋಲಗುಂಬಜ್, ಮ್ಯೂಜಿಯಂ, ಬಾರಾಕಮಾನ, ಇಬ್ರಾಹಿಮ್ ರೋಜಾ, ಜಾಮೀಯಾ ಮಸೀಜಿದ್ ಮೊದಲಾದವುಗಳನ್ನು ನೋಡಲಾಯಿತಲ್ಲದೆ ಅವುಗಳ ಕುರಿತು ಸಂಪೂರ್ಣ ವಿವರಗಳನ್ನು ನೀಡಿ ವಿದ್ಯಾರ್ಥಿಗಳ ಸಂದೇಹದ ಪ್ರಶ್ನೆಗಳಿಗೆ ಉತ್ತರವನ್ನು ಪರಂಪರಾ ಕೂಟದ ಸಂಚಾಲಕ ಡಾ.ಎಂ.ಎನ್.ಕಡಪಟ್ಟಿ ನೀಡಿದರು. ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ ಮಾರ್ಗದರ್ಶನದಲ್ಲಿ ಪರಂಪರಾಕೂಟದ ಕಾರ್ಯದರ್ಶಿ ಡಾ.ಪ್ರಭು ಗಂಜಿಹಾಳ, ಪ್ರೊ.ಮಲ್ಲಿಕಾರ್ಜುನ ಬೇವೂರ ಅವರ ನೇತೃತ್ವದಲ್ಲಿ ಬಿ.ಎ. ದ್ವಿತೀಯ, ನಾಲ್ಕನೆಯ ಹಾಗೂ ಆರನೇ ಸೆಮಿಸ್ಟರ್ ನ ಒಟ್ಟು ೪೯ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಶೈಕ್ಷಣಿಕ ಅಧ್ಯಯನ ಪ್ರವಾಸದಲ್ಲಿ ಪಾಲ್ಗೊಂಡಿದ್ದರು.
ವರದಿ: ಡಾ.ಪ್ರಭು ಗಂಜಿಹಾಳ್
ಮೊ:೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.